ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad


ನಾವೆಲ್ಲರೂ ನಮ್ಮ ವಾಟ್ಸಾಪ್‌ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ. ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.

ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವೀಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.

ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ/ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.

ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ, ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ.

ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.

ವಾಟ್ಸಾಪ್ ಮೊ. ಸಂಖ್ಯೆ 9663826972.

ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹಿಸುವಂತೆ ವಿನಂತಿಸಿಕೊಂಡಿರುತ್ತಾರೆ.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು