ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಲಾಕ್ಡೌನ್‌ನಿಂದ ಕೊಳೆಯುತ್ತಿರುವ ಬೆಳೆ: ಅಪಾರ ನಷ್ಟ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಹೊಸದಿಲ್ಲಿ: ದೇಶಕ್ಕೆ ಕಾಲಿಟ್ಟಿರುವ ಮಹಾಮಾರಿ ಕೊರೋನಾದಿಂದಾಗಿ ಲಾಕ್ಡೌನ್ ಘೋಷಣೆಯಾಗಿದೆ. ಜನರ ಬದುಕು ಅಲ್ಲೋಲ ಕಲ್ಲೋಲವಾಗಿದೆ. ಅದರಲ್ಲೂ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹೇಳುವುದೇ ಬೇಡ.

ಅದರಲ್ಲೂ ವಿಶೇಷವಾಗಿ ರೈತರ ಬದುಕು ದಿಕ್ಕು ತೋಚದಂತಾಗಿದೆ. ತಾವು ಬೆಳೆದ ಫಲ ಗದ್ದೆಯಲ್ಲೇ, ತೋಟದಲ್ಲೇ ಕೊಳೆಯುವಂತಾಗಿದೆ. ಕೆಲವು ರೈತರು ಸಾಲ ಮಾಡಿ ಬೆಳೆದ ಬೆಳೆಗೂ ಬೆಲೆ ಇಲ್ಲದಂತಾಗಿದೆ.

ಮಳೆ ಬೆಳೆಗೆ ಉತ್ತಮ ಸಹಕಾರ ನೀಡಿದ್ದರೂ ಲಾಕ್ಡೌನ್‌ನಿಂದಾಗಿ ಮಾರುಕಟ್ಟೆ ವ್ಯವಸ್ಥೆ ಲಭ್ಯವಾಗುತ್ತಿಲ್ಲ. ತಾವು ಬೆಳೆದ ಉತ್ಪನ್ನವನ್ನು ಸಾಗಣೆ ಮಾಡುವುದೂ ಕಠಿಣವಾಗಿದೆ.

ಒಟ್ಟಾರೆಯಾಗಿ ರೈತರು ತಾವು ಬೆಳೆದ ಬೆಳೆಗೆ ಗ್ರಾಹಕರನ್ನು ಫೇಸ್‌ಬುಕ್‌, ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಹುಡುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಂತೂ ರೈತರು ಕಂಗೆಟ್ಟು ಹೋಗಿದ್ದಾರೆ.


Tags: Covid 19, Agri products, Lockdown, ಕೃಷಿ ಉತ್ಪನ್ನಗಳು, ಲಾಕ್‌ಡೌನ್‌ ಸಂಕಷ್ಟ

Post a Comment

ನವೀನ ಹಳೆಯದು