ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಸುರತ್ಕಲ್: ಲಾರ್ಡ್ ಕೃಷ್ಣ ಎಸ್ಟೇಟ್‌ನಲ್ಲಿ ಲಸಿಕೆ ಅಭಿಯಾನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಸುರತ್ಕಲ್: ಉಳ್ಳವರು ಲಸಿಕೆಯನ್ನು ಮಿತವ್ಯಯ ದರ ನೀಡಿ ಹಾಕಿಕೊಂಡರೆ ಬಡವರಿಗೆ ಲಸಿಕೆ ಸಿಗಲು ಸಾಧ್ಯವಿದ್ದು, ಈ ನಿಟ್ಟಿನಲ್ಲಿ ಲಾರ್ಡ್ ಕೃಷ್ಣ ಎಸ್ಟೇಟ್ ನಿವಾಸಿಗಳು ಮಾಡಿರುವ ಲಸಿಕೆ ಅಭಿಯಾನ ಮಾದರಿಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು.

ಇಲ್ಲಿನ ವೆಲ್ಫೇರ್ ಎಸೋಸಿಯೇಷನ್ ಆಯೋಜಿಸಿದ ಲಸಿಕೆ ಅಭಿಯಾನದಲ್ಲಿ ಮಾತನಾಡಿದರು.

ಲಸಿಕೆ ಪಡೆದುಕೊಂಡರೂ ಕೋವಿಡ್ ಬರುವ ಸಾಧ್ಯತೆಯಿದ್ದರೂ ಜೀವಕ್ಕೆ ಹಾನಿಯಾದ ಪ್ರಕರಣಗಳು ವರದಿ ಆಗಿಲ್ಲ. ಹೀಗಾಗಿ ಲಸಿಕೆ ಪಡೆದುಕೊಳ್ಳುವುದು ಅಗತ್ಯ ಎಂದು ನುಡಿದರು.

ಆರ್ ಎಸ್ ಎಸ್ ಮುಖಂಡರಾದ ಪ್ರಕಾಶ್ ಮಾತನಾಡಿ, ಮಹಾಮಾರಿ ಕೊರೊನಾ ದೇಶಕ್ಕೆ ಪಸರಿಸಿದೆ. ಸಾವು ನೋವು ನಮ್ಮ ಕಣ್ಣ ಆಗುತ್ತದೆ ಎಂಬುದನ್ನೂ ಯಾರೂ ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಲಸಿಕೆ ಅನಿವಾರ್ಯ. ಹೆಲ್ಮೆಟ್ ಹಾಕಿಕೊಂಡು ಬೈಕ್ ಸವಾರ ಪ್ರಯಾಣಿಸಿದಾಗ ಹೇಗೆ ರಕ್ಷಣೆ ಸಿಗುತ್ತದೋ ಹಾಗೆಯೇ ಲಸಿಕೆ ನಮ್ಮ ಪ್ರಾಣಕ್ಕೆ ರಕ್ಷಣೆ ನೀಡುತ್ತದೆ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳ ಬೇಕು  ಎಂದರು.  

ಬ್ಲ್ಯಾಕ್ ಫಂಗಸ್ ಗೆ ಔಷಧ ದೇಶದಲ್ಲಿ ಇಲ್ಲದೇ ಇದ್ದಾಗ ಶಾಸಕ  ಡಾ.ಭರತ್ ಶೆಟ್ಟಿ ಅವರು ಲಂಡನ್ ನಿಂದ ಔಷಧ ತರಿಸಿ ನೀಡಿದ್ದು ನಾಲ್ಕಾರು ಜನರ ಪ್ರಾಣ ರಕ್ಷಣೆ ಕಾರಣರಾಗಿದ್ದಾರೆ. ಇಂತಹ ಸೇವಾ ಮನೋಭಾವ ಇದ್ದಾಗ ಎಂತಹ ಕಠಿಣ ಪರಿಸ್ಥಿತಿ ಎದುರಿಸಲು ಸಾಧ್ಯ ಎಂದು ಶಾಸಕರನ್ನು ಶ್ಲಾಘಿಸಿದರು.

ಸುರತ್ಕಲ್ ಲಾರ್ಡ್ ಕೃಷ್ಣ ವೆಲ್ಫೇರ್ ಎಸೋಸಿಯೇಷನ್ ಗೌರವಾಧ್ಯಕ್ಷ  ನಾಗೇಂದ್ರ ಭಾರದ್ವಾಜ್, ಕಾರ್ಪೊರೇಟರ್ ಸರಿತ ಶಶಿಧರ್, ಎಸೋಸಿಯೇಷನ್ ಅಧ್ಯಕ್ಷ ಹೇಮೇಂದ್ರ ಆಳ್ವ, ಎಸೋಸಿಯೇಷನ್ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಐತಾಳ, ಇನ್ನರ್ ವೀಲ್  ಅಧ್ಯಕ್ಷೆ ಸುಮಿತ್ರ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Visit: Upayuktha Directory- You get here You want

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

ನವೀನ ಹಳೆಯದು