ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಭಕ್ತಿಗೀತೆ- ರಂಗನಾಯಕ ರಾಜೀವ ಲೋಚನ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad




 ಆಲಿಸಿ: ಭಕ್ತಿಗೀತೆ- ರಂಗನಾಯಕ ರಾಜೀವ ಲೋಚನ

ಗಾಯಕರು: ಪುತ್ತೂರು ನರಸಿಂಹ ನಾಯಕ್




ರಂಗನಾಯಕ ರಾಜೀವ ಲೋಚನ
ರಮಣನೇ ಬೆಳಗಾಯಿತು ಏಳೆನ್ನುತಾ ।ಪ।

ಅಂಗನೇ  ಲಕುಮಿ ತಾ ಪತಿಯನೆಬ್ಬಿಸಿದಳು
ಶೃಂಗಾರದ ನಿದ್ರೆ ಸಾಕೆನ್ನುತಾ ।।ಪ।।

ಪಕ್ಷಿರಾಜನು ಬಂದು ಬಾಗಿಲಲ್ಲಿ ನಿಂದು
ಅಕ್ಷಿ ತೆರೆದು ಬೇಗ ಈಕ್ಷೀಸೆಂದು
ಪಕ್ಷಿ ಜಾತಿಗಳೆಲ್ಲಾ ಚಿಲಿಪಿಲಿಗುಟ್ಟುತಾ
ಸೂಕ್ಷ್ಮದಲ್ಲಿ ನಿನ್ನ ಸ್ಮರಿಸುವವೋ ಕೃಷ್ಣ ।।ಪ।।


ಸನಕ ಸನಂದನ  ಸನತ್ಸುಜಾತರು ಬಂದು
ವಿನಯದಿಂ ಕರ ಮುಗಿದು ಓಲೈಪರು
ಘನಶುಕ  ಶೌನಕ ವ್ಯಾಸ ವಾಲ್ಮೀಕರು
ನೆನೆದು ನೆನೆದು ಕೊಂಡಾಡುವರು  ಹರಿಯೇ ।।ಪ।।

ಸುರರು ಕಿನ್ನರರು ಕಿಂಪುರುಷರು ಉರಗರು
ಪರಿಪರಿಯಲಿ  ನಿನ್ನ ಸ್ಮರಿಸುವರು
ಅರುಣನು ಬಂದು ಉದಯಾಚಲದಲಿ ನಿಂದು
ಕಿರಣ ತೋರುವನು  ಭಾಸ್ಕರನು ಶ್ರೀಹರಿಯೇ ।।ಪ।।

ಪದುಮನಾಭನೇ  ನಿನ್ನ ನಾಮಾಮೃತವನ್ನು
ಪದುಮಾಕ್ಷಿಯರು ತಮ್ಮ ಗೃಹದೊಳಗೆ
ಉದಯದೊಳೆದ್ದು ಸವಿದಾಡುತ್ತಾ  ಪಾಡುತ್ತಾ
ದಧಿಯ ಕಡೆವರೇಳೋ  ಮಧುಸೂಧನ ಕೃಷ್ಣಾ।।ಪ।।

ಮುರಮಥನನೇ  ನಿನ್ನ ಚರಣದ  ಸೇವೆಯ
ಕರುಣಿಸಬೇಕೆಂದು ತರುಣಿಯರು
ಪರಿಪರಿಯಿಂದಲೇ  ಸ್ಮರಿಸಿ ಹಾರೈಪರು
ಪುರಂದರ ವಿಠಲ ನೀನೇಳೋ  ಶ್ರೀ ಹರಿಯೇ।।ಪ।।


Post a Comment

ನವೀನ ಹಳೆಯದು