ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad

 



ಆಲಿಸಿ: ಎಲ್ಲಾದರೂ ಇರು, ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು

ಸಂಗೀತ: ಸಿ ಅಶ್ವಥ್‌

ಗಾಯಕರು ಡಾ. ರಾಜ್‌ಕುಮಾರ್‌


ಎಲ್ಲಾದರು ಇರು ಎಂತಾದರು ಇರು ||೨||

ಎಂದೆಂದಿಗೂ ನೀ ಕನ್ನಡವಾಗಿರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ


ಕನ್ನಡ ಗೋವಿನ ಓ ಮುದ್ದಿನ ಕರು ||೨||

ಕನ್ನಡತನ ಒಂದಿದ್ದರೆ, ಅಮ್ಮಗೆ ಕಲ್ಪತರು

ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗೂ ನೀ ಕನ್ನಡವಾಗಿರು


ನೀ ಮೆಟ್ಟುವ ನೆಲ, ಅದೆ ಕರ್ನಾಟಕ

ನೀನೇರುವ ಮಲೆ ಸಹ್ಯಾದ್ರಿ

ನೀ ಮೆಟ್ಟುವ ನೆಲ, ಅದೆ ಕರ್ನಾಟಕ

ನೀನೇರುವ ಮಲೆ ಸಹ್ಯಾದ್ರಿ


ನೀ ಮುಟ್ಟುವ ಮರ ಶ್ರೀಗಂಧದ ಮರ ||೨||

ನೀ ಕುಡಿಯುವ ನೀರ್ ಕಾವೇರಿ


ಪಂಪನ ಓದುವ ನಿನ್ನಾ ನಾಲಗೆ

ಕನ್ನಡವೇ ಸತ್ಯ

ಕುಮಾರವ್ಯಾಸನ ಆಲಿಪ ಕಿವಿಯದು

ಕನ್ನಡವೇ ನಿತ್ಯ


ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗೂ ನೀ ಕನ್ನಡವಾಗಿರು


ಹರಿಹರ ರಾಘವರಿಗೆ ಎರಗುವ ಮನ

ಹಾಳಾಗಿಹ ಹಂಪೆಗೆ ಕೊರಗುವ ಮನ

ಹರಿಹರ ರಾಘವರಿಗೆ ಎರಗುವ ಮನ

ಹಾಳಾಗಿಹ ಹಂಪೆಗೆ ಕೊರಗುವ ಮನ


ಬೆಳ್ಗೊಳ ಬೇಲೂರ್‍ಗಳ ನೆನೆಯುವ ಮನ


ಮಲೆನಾಡಿಗೆ ಹೊಂಪುಳಿ ಹೋಗುವ ಮನ

ಕಾಜಾಣಕೆ ಗಿಳಿ, ಕೋಗಿಲೆ ಇಂಪಿಗೆ

ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ

ಕಾಜಾಣಕೆ ಗಿಳಿ, ಕೋಗಿಲೆ ಇಂಪಿಗೆ

ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ


ಮಾವಿನ ಹೊಂಗೆಯ ತಳಿರಿನ ತಂಪಿಗೆ 


ರೋಮಾಂಚನಗೊಳುವಾ ತನು ಮನ

ಕನ್ನಡವೇ ಸತ್ಯ, ಕನ್ನಡವೇ ನಿತ್ಯ

ಎಲ್ಲಾದರು ಇರು ಎಂತಾದರು ಇರು

ಎಂದೆಂದಿಗು ನೀ ಕನ್ನಡವಾಗಿರು


ಎಲ್ಲಿದ್ದರೆ ಏನ್ ಎಂತಿದ್ದರೆ ಏನ್

ಎಲ್ಲಿದ್ದರೆ ಏನ್ ಎಂತಿದ್ದರೆ ಏನ್


ಎಂದೆಂದಿಗು ತಾನ್ ಕನ್ನಡವೇ ಸತ್ಯ ಕನ್ನಡವೇ ನಿತ್ಯ

ಅನ್ಯವೆನಲದೆ ಮಿಥ್ಯ


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ



Post a Comment

ನವೀನ ಹಳೆಯದು