ಸುದ್ದಿ ಮತ್ತು ಜಾಹೀರಾತುಗಳಿಗಾಗಿ ಸಂಪರ್ಕಿಸಿ: 7019126946 ಆಲಿಸಿ: ಭಕ್ತಿಗೀತೆ- ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆ ಸುಯೋಗ- ಯೋಗಾಭ್ಯಾಸ ಮಾಲಿಕೆ- ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಂದ | ಶ್ರೀ ಚಕ್ರಾರ್ಚನ ಚಂದ್ರಿಕಾ- ಶ್ರೀ ಚಿದಾನಂದನಾಥರ 'ಶ್ರೀವಿದ್ಯಾಸಪರ್ಯಾ' ಪದ್ಧತಿಯ ಕನ್ನಡ ಲಿಪ್ಯಂತರ- ಪ್ರಕಾಶಕರು: ಅದಿತ್ರಿ ಪಬ್ಲಿಕೇಶನ್ಸ್‌ ಬೆಂಗಳೂರು. ಪ್ರತಿಗಳಿಗಾಗಿ ಸಂಪರ್ಕಿಸಿ- 99809 49005 | ಉಪಯುಕ್ತ ಪಾಡ್‌ಕಾಸ್ಟ್‌ ಪುಟಾಣಿ ಕತೆಗಳು | ಉಪಯುಕ್ತ ನ್ಯೂಸ್‌: ಈ ವರೆಗಿನ ಸುದ್ದಿ ಮುಖ್ಯಾಂಶಗಳು

Ad



ಈಶ ನಿನ್ನ ಚರಣ ಭಜನೆ | ಆಶೆಯಿಂದ ಮಾಡುವೆನು

ದೋಶರಾಶಿ ನಾಶಮಾಡು ಶ್ರೀಶ ಕೇಶವ ||


ಶರಣು ಹೊಕ್ಕೆನಯ್ಯ ಎನ್ನ | ಮರಣ ಸಮಯದಲ್ಲಿ ನಿನ್ನ |

ಚರಣ ಸ್ಮರಣೆ ಕರುಣಿಸಯ್ಯ ನಾರಾಯಣ ||೧||


ಶೋಧಿಸೆನ್ನ ಭವದ ಕಲುಶ | ಭೋಧಿಸಯ್ಯ ಜ್ಞಾನವೆನಗೆ||

ಬಾಧಿಸುವ ಯಮನ ಬಾಧೆ | ಬಿಡಿಸು ಮಾಧವ ||೨||


ಹಿಂದನೇಕ ಯೋನಿಗಳಲಿ | ಬಂದು ಬಂದು ನೊಂದೆನಯ್ಯ ||

ಇಂದು ಭವದ ಬಂಧ ಬಿಡಿಸೋ ತಂದೆ ಗೋವಿಂದ ||೩||


ಭ್ರಷ್ಟನೆನಿಸಬೇಡ ಕೃಷ್ಣ | ಇಷ್ಟು ಮಾತ್ರ ಬೇಡಿಕೊಂಬೆ ||

ಶಿಷ್ಟರೊಡನೆ ಇಟ್ಟು ಕಷ್ಟ | ಬಿಡಿಸು ವಿಷ್ಣುವೇ ||೪||


ಮದನನಯ್ಯ ನಿನ್ನ ಮಹಿಮೆ | ವದನದಲ್ಲಿ ನುಡಿಯುವಂತೆ ||

ಹೃದಯದಲ್ಲಿ ಹುದುಗಿಸಯ್ಯ ಮಧುಸೂದನ ||೫||


ಕವಿದುಕೊಂಡು ಇರುವ ಪಾಪ | ಸವೆದು ಪೋಗುವಂತೆ ಮಾಡಿ ||

ಜವನ ಬಾಧೆಯನ್ನು ಬಿಡಿಸೋ | ಶ್ರೀ ತ್ರಿವಿಕ್ರಮ ||೬||


ಕಾಮಜನಕ ನಿನ್ನ ನಾಮ | ಪ್ರೇಮದಿಂದ ಪಾಡುವಂಥ ||

ನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ ||೭||


ಮೊದಲು ನಿನ್ನ ಪಾದಪೂಜೆ | ಒದಗುವಂತೆ ಮಾಡೋ ಎನ್ನ ||

ಹೃದಯದೊಳಗೆ ಸದನ ಮಾಡು ಮುದದಿ ಶ್ರೀಧರ ||೮||


ಹುಸಿಯನಾಡಿ ಹೊಟ್ಟೆ ಹೊರೆವ | ವಿಷಯದಲ್ಲಿ ರಸಿಕನೆಂದು ||

ಹುಸಿಗೆ ಹಾಕದಿರೋ ಎನ್ನ ಹೃಷೀಕೇಶ ನೇ ||೯||


ಕಾಮಕ್ರೋಧ ಬಿಡಿಸಿ ನಿನ್ನ | ನಾಮ ಜಿಹ್ವೆಯೊಳಗೆ ನುಡಿಸು ||

ಶ್ರೀಮಹಾನುಭಾವನಾದ ದಾಮೋದರ ||೧೦||


ಬಿದ್ದು ಭವದನೇಕ ಜನುಮ | ಬದ್ದನಾಗಿ ಕಲುಷದಿಂದ ||

ಗೆದ್ದು ಪೋಪ ಬುಧ್ಧಿ ತೋರೊ ಪದ್ಮನಾಭ ನೆ ||೧೧||


ಪಂಕಜಾಕ್ಷ ನೀನೆ ಎನ್ನ | ಮಂಕುಬುದ್ಧಿಯನ್ನು ಬಿಡಿಸಿ |

ಕಿಂಕರನ್ನ ಮಾಡಿಕೊಳ್ಳೋ ಸಂಕರ್ಷಣ ||೧೨||


ಏಸು ಜನ್ಮ ಬಂದರೇನು | ದಾಸನಲ್ಲವೇನು ನಾನು ||

ಘಾಸಿ ಮಾಡದಿರು ಇನ್ನು ವಾಸುದೇವ ನೇ ||೧೩||


ಬುದ್ಧಿ ಶೂನ್ಯನಾಗಿ ಎನ್ನ | ಬದ್ಧಕಾಯ ಕುಹಕ ಮನವ ||

ತಿದ್ದಿ ಹೃದಯ ಶುದ್ಧ ಮಾಡೋ ಪ್ರದ್ಯುಮ್ನ ನೇ ||೧೪||


ಜನನಿ ಜನಕ ನೀನೆಯೆಂದು | ನೆನೆವೆನಯ್ಯ ದೀನಬಂಧು ||

ಎನಗೆ ಮುಕ್ತಿ ಪಾಲಿಸಿನ್ನು ಅನಿರುದ್ಧ ನೇ ||೧೫||


ಹರುಶದಿಂದ ನಿನ್ನ ನಾಮ | ಸ್ಮರಿಸುವಂತೆ ಮಾಡು ಕ್ಷೇಮ ||

ಇರಿಸು ಚರಣದಲ್ಲಿ ಪ್ರೇಮ ಪುರುಷೋತ್ತಮ ||೧೬||


ಸಾಧುಸಂಗ ಕೊಟ್ಟು ನಿನ್ನ | ಪಾದಭಜನೆ ಇತ್ತು ಎನ್ನ ||

ಭೇದಮಾಡಿ ನೋಡದಿರೊ ಹೇ ಅಧೋಕ್ಷಜ ||೧೭||


ಚಾರುಚರಣ ತೋರಿ ಎನಗೆ | ಪಾರುಗಾಣಿಸಯ್ಯ ಕೊನೆಗೆ ||

ಭಾರ ಹಾಕಿರುವೆ ನಿನಗೆ ನಾರಸಿಂಹ ನೇ ||೧೮||


ಸಂಚಿತಾದಿ ಪಾಪಗಳು | ಕಿಂಚಿತಾದ ಪೀಡೆಗಳನು ||

ಮುಂಚಿತಾಗಿ ಕಳೆಯಬೇಕೋ ಸ್ವಾಮಿ ಅಚ್ಯುತ ||೧೯||


ಜ್ಞಾನ ಭಕುತಿ ಕೊಟ್ಟು ನಿನ್ನ | ಧ್ಯಾನದಲ್ಲಿ ಇಟ್ಟು ಸದಾ ||

ಹೀನ ಬುದ್ಧಿ ಬಿಡಿಸೊ ಮುನ್ನu ಶ್ರೀ ಜನಾರ್ಧನ ||೨೦||


ಜಪತಪಾನುಷ್ಠಾನವಿಲ್ಲ | ಕುಪಿತಗಾಮಿಯಾದ ಎನ್ನ ||

ಕೃಪೆಯ ಮಾಡಿ ಕ್ಷಮಿಸಬೇಕು ಹೇ ಉಪೇಂದ್ರ ನೇ ||೨೧||


ಮೊರೆಯ ಇಡುವೆನಯ್ಯ ನಿನಗೆ | ಶರಧಿಶಯನ ಶುಭಮತಿಯ||

ಇರಿಸೋ ಭಕ್ತರೊಳಗೆ ಪರಮಪುರುಷ ಶ್ರೀ ಹರೇ ||೨೨||


ಪುಟ್ಟಿಸಲೇಬೇಡ ಇನ್ನು | ಪುಟ್ಟಿಸಿದಕೆ ಪಾಲಿಸಿನ್ನು||

ಇಷ್ಟು ಮಾತ್ರ ಬೇಡಿಕೊಂಬೆ ಶ್ರೀ ಕೃಷ್ಣ ನೇ ||೨೩||


ಸತ್ಯವಾದ ನಾಮಗಲನು | ನಿತ್ಯದಲ್ಲಿ ಪಠಿಸುವರಿಗೆ ||

ಅರ್ಥಿಯಿಂದ ಸಲಹುತಿರುವ ಕರ್ತೃ ಕೇಶವ ||೨೪||


ಮರೆಯದಲೆ ಹರಿಯ ನಾಮ | ಬರೆದು ಓದಿ ಪೇಳ್ದವರಿಗೆ ||

ಕರೆದು ಮುಕ್ತಿ ಕೊಡುವ ನೆಲೆಯಾದಿಕೇಶವ ||೨೫||


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

أحدث أقدم